12:30 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಗೇಟ್ ತೆರೆದ ಪ್ರಕರಣ: ತಿಂಗಳ ಬಳಿಕ ಡಿವೈಎಫ್ ಐ ಕಾರ್ಯಕರ್ತರ ಮೇಲೆ ಎಫ್ ಐಆರ್

06/05/2023, 09:00

ಉಳ್ಳಾಲ(reporterkarnataka.com): ಉಳ್ಳಾಲ ತಾಲೂಕು ಹರೇಕಳ ಕಾಮಗಾರಿ ಮುಗಿದ ಸೇತುವೆಯ ಗೇಟ್ ತೆರೆದು ಸಂಚಾರಕ್ಕೆ ಅವಕಾಶ ಕಲ್ಪಿಸಿದ ಪ್ರಕರಣದಲ್ಲಿ ತಿಂಗಳ ತರುವಾಯ ಅಧಿಕಾರಿಗಳು ಕೊಣಾಜೆ ಠಾಣೆಯಲ್ಲಿ ಡಿವೈಎಫ್ಐ ಕಾರ್ಯಕರ್ತರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.
ಗೇಟ್ ತೆರವುಗೊಳಿಸಿದ
ಸಂದರ್ಭ ಅಧಿಕಾರಿಗಳು ದೂರು ನೀಡಿದ್ದರೂ ಕಾನೂ‌ನು ಉಲ್ಲಂಘನೆಯ ಅಂಶಗಳು ಇಲ್ಲದ್ದರಿಂದ ಪೊಲೀಸರು ಎಫ್ ಐಆರ್ ಹಾಕದೆ ಹೇಳಿಕೆ ಪಡೆದು ಪ್ರಕರಣ ಮುಕ್ತಾಯಗೊಳಿಸಿದ್ದರು. ಇದೀಗ ಘಟನೆ ನಡೆದು ತಿಂಗಳ ತರುವಾಯ ಹೊಸದಾಗಿ ಎಫ್ ಐಆರ್ ಹಾಕಲಾಗಿದೆ.
ಸಿಪಿಐಎಂ, ಡಿವೈಎಫ್ಐ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬಿಜೆಪಿ ಸೋಲಿಸಲು ಪೂರ್ಣಪ್ರಮಾಣದಲ್ಲಿ ಓಡಾಡುತ್ತಿದ್ದಾರೆ. ಜಾತ್ಯಾತೀತ ಅಭ್ಯರ್ಥಿಗಳ ಪರವಾಗಿ ಪರಿಣಾಮಕಾರಿ ಪ್ರಚಾರ ನಡೆಸುತ್ತಿದ್ದಾರೆ. ಇದು ಬಿಜೆಪಿ ನಾಯಕರ ಕಣ್ಣು ಕೆಂಪಗಾಗಿಸಿದೆ.‌ಉಳ್ಳಾಲದಲ್ಲಿಯೂ ಸಿಪಿಎಂ, ಡಿವೈಎಫ್ಐ ಚುನಾವಣಾ ತಂತ್ರಗಳು ಬಿಜೆಪಿ ಲೆಕ್ಕಾಚಾರವನ್ನು ಉಲ್ಟಾ ಹೊಡೆಸುತ್ತಿದೆ. ಅದರ ಪರಿಣಾಮ ಡಿವೈಎಫ್ಐ ಕಾರ್ಯಕರ್ತರ ಮೇಲೆ ಸುಳ್ಳು ಎಫ್ ಐಆರ್ ದಾಖಲಿಸಿ ಅಧಿಕಾರಿಗಳು ಬಿಜೆಪಿ ನಾಯಕರ ಮಾತಿಗೆ ಇ‌ನ್ಜೂ ಕಿವಿಗೊಡುತ್ತಿರುವುದು ಅಚ್ಚರಿಯ ಸಂಗತಿ ಎಂದು ಡಿವೈಎಫ್ ಐ ನಾಯಕ ಮುನೀರ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು