3:35 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ  ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ 

01/10/2022, 13:46

ಮಂಗಳೂರು(reporterkarnataka.com): ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ. 

ಸೇತುವೆಯನ್ನು ಸಂಪರ್ಕಿಸುವಲ್ಲಿ ರಸ್ತೆ ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ನಾಗರಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಆಣೆಕಟ್ಟು ನಿರ್ಮಾಣದ ನಂತರ ಸಂಚಾರಿ ದೋಣಿ ನಿರ್ವಾಹಕರು ದೋಣಿ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ ಇದರಿಂದಾಗಿ ದಿನನಿತ್ಯ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ನದಿ ಆಚೆಗಿನ ಪ್ರಯಾಣಕ್ಕೆ ಸಮಸ್ಯೆ ಉಂಟಾಗಿದೆ. ಸೇತುವೆ ಮೇಲೆ ನಾಗರಿಕರಿಗೆ ನಡೆದಾಡಲು ಸಂಜೆ 7ರ ನಂತರ ಮುಂಜಾನೆ 6 ಗಂಟೆಯ ತನಕ ನಿರ್ಬಂಧ ಹೇರಿ ಸೇತುವೆಯ ಕಾಮಗಾರಿ ಪೂರ್ಣಗೊಂಡರೂ ಎರಡು ಬದಿಗಳಲ್ಲಿ ಗೇಟುಗಳನ್ನು ಮುಚ್ಚಿರುವ ಸಣ್ಣ ನೀರಾವರಿ ಇಲಾಖೆಯ ತೀರ್ಮಾನದಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆ ಅನುಭವಿಸುವಂತಾಗಿದೆ. ಸಂಜೆ 7ರ ನಂತರ ಬರುವ ನಾಗರಿಕರು ಬೇಲಿ ಹಾರಿ ಬರುವ ಪರಿಸ್ಥಿತಿ ಇದ್ದು ಇದರಿಂದ ನಾಗರಿಕರ ಜೀವಕ್ಕೆ ಹಾನಿ ಆಗುವ ಸಾಧ್ಯತೆ ಇದ್ದು ಕೂಡಲೇ ಸಾರ್ವಜನಿಕರಿಗೆ 24 ಗಂಟೆ ಮುಕ್ತ ಓಡಾಟಕ್ಕೆ ಅವಕಾಶ ಕೊಡಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ.

ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅನುಕೂಲ ಆಗುವಂತೆ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಾಗಿ ಡಿವೈಎಫ್ಐ ನಾಯಕರ ನಿಯೋಗವು ಜಲಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿ ಮುಂದಿನ 15 ದಿನದ ಒಳಗಾಗಿ ಸಾರ್ವಜನಿಕರಿಗೆ ಮುಕ್ತವಾಗಿ ನಡೆದಾಡಲು ಅವಕಾಶ ಮಾಡಿಕೊಡಲು ಅಸಾಧ್ಯವಾದಲ್ಲಿ ಸಾರ್ವಜನಿಕರನ್ನು ಸಂಘಟಿಸಿ  ಹೋರಾಟವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಡಿವೈಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ  ಅಶ್ರಫ್ ಹರೇಕಳ, ಹರೇಕಳ ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಖಂಡಿಗೆ ಉಪಸ್ಥಿತರಿದ್ದರು ಎಂದು ಡಿವೈಎಫ್ಐ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು