3:59 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ  ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ 

01/10/2022, 13:46

ಮಂಗಳೂರು(reporterkarnataka.com): ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ. 

ಸೇತುವೆಯನ್ನು ಸಂಪರ್ಕಿಸುವಲ್ಲಿ ರಸ್ತೆ ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ನಾಗರಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಆಣೆಕಟ್ಟು ನಿರ್ಮಾಣದ ನಂತರ ಸಂಚಾರಿ ದೋಣಿ ನಿರ್ವಾಹಕರು ದೋಣಿ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ ಇದರಿಂದಾಗಿ ದಿನನಿತ್ಯ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ನದಿ ಆಚೆಗಿನ ಪ್ರಯಾಣಕ್ಕೆ ಸಮಸ್ಯೆ ಉಂಟಾಗಿದೆ. ಸೇತುವೆ ಮೇಲೆ ನಾಗರಿಕರಿಗೆ ನಡೆದಾಡಲು ಸಂಜೆ 7ರ ನಂತರ ಮುಂಜಾನೆ 6 ಗಂಟೆಯ ತನಕ ನಿರ್ಬಂಧ ಹೇರಿ ಸೇತುವೆಯ ಕಾಮಗಾರಿ ಪೂರ್ಣಗೊಂಡರೂ ಎರಡು ಬದಿಗಳಲ್ಲಿ ಗೇಟುಗಳನ್ನು ಮುಚ್ಚಿರುವ ಸಣ್ಣ ನೀರಾವರಿ ಇಲಾಖೆಯ ತೀರ್ಮಾನದಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆ ಅನುಭವಿಸುವಂತಾಗಿದೆ. ಸಂಜೆ 7ರ ನಂತರ ಬರುವ ನಾಗರಿಕರು ಬೇಲಿ ಹಾರಿ ಬರುವ ಪರಿಸ್ಥಿತಿ ಇದ್ದು ಇದರಿಂದ ನಾಗರಿಕರ ಜೀವಕ್ಕೆ ಹಾನಿ ಆಗುವ ಸಾಧ್ಯತೆ ಇದ್ದು ಕೂಡಲೇ ಸಾರ್ವಜನಿಕರಿಗೆ 24 ಗಂಟೆ ಮುಕ್ತ ಓಡಾಟಕ್ಕೆ ಅವಕಾಶ ಕೊಡಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ.

ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅನುಕೂಲ ಆಗುವಂತೆ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಾಗಿ ಡಿವೈಎಫ್ಐ ನಾಯಕರ ನಿಯೋಗವು ಜಲಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿ ಮುಂದಿನ 15 ದಿನದ ಒಳಗಾಗಿ ಸಾರ್ವಜನಿಕರಿಗೆ ಮುಕ್ತವಾಗಿ ನಡೆದಾಡಲು ಅವಕಾಶ ಮಾಡಿಕೊಡಲು ಅಸಾಧ್ಯವಾದಲ್ಲಿ ಸಾರ್ವಜನಿಕರನ್ನು ಸಂಘಟಿಸಿ  ಹೋರಾಟವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಡಿವೈಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ  ಅಶ್ರಫ್ ಹರೇಕಳ, ಹರೇಕಳ ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಖಂಡಿಗೆ ಉಪಸ್ಥಿತರಿದ್ದರು ಎಂದು ಡಿವೈಎಫ್ಐ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು