7:34 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ: ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ

26/06/2022, 16:40

ಹರಿದ್ವಾರ(reporterkarnataka.com): ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಹಾಗೂ ಕಾಶೀ ಮಠಾಧೀಶರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಹರಿದ್ವಾರದಲ್ಲಿ ಭೇಟಿಯಾದರು.

ಉಡುಪಿಯ ಶ್ರೀ ಸಂಸ್ಥಾನ ಪೇಜಾವರದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರದಲ್ಲಿ ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು . 

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಮಾತನಾಡುತ್ತಾ ಶ್ರೀಗಳವರ ಬಾಂಧವ್ಯ , ಸ್ನೇಹ ಕಂಡು ತುಂಬಾ ಸಂತೋಷವಾಯಿತು. ನಮ್ಮೆಲ್ಲರಿಗೂ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ  ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀ ಗಳವರು  ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ. ತಮ್ಮ ಗುರುಗಳಾದ ವೃನ್ದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ , ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು. 

ಈ ಸಂದರ್ಭದಲ್ಲಿ ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ , ಜಿಎಸ್ ಬಿ ಸೇವಾಮಂಡಳದ ಆರ್ . ಜಿ . ಭಟ್ , ದೆಹಲಿ ಜಿ ಎಸ್ ಬಿ ಸಮಾಜದ ಪ್ರಕಾಶ್ ಪೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು