9:08 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಹರಿದ್ವಾರದಲ್ಲಿ ಪೇಜಾವರ ಶ್ರೀ ಹಾಗೂ ಕಾಶೀ ಮಠಾಧೀಶರ ಸಮಾಗಮ: ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ

26/06/2022, 16:40

ಹರಿದ್ವಾರ(reporterkarnataka.com): ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಹಾಗೂ ಕಾಶೀ ಮಠಾಧೀಶರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಹರಿದ್ವಾರದಲ್ಲಿ ಭೇಟಿಯಾದರು.

ಉಡುಪಿಯ ಶ್ರೀ ಸಂಸ್ಥಾನ ಪೇಜಾವರದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀ ಕಾಶೀ ಮಠ ಸಂಸ್ಥಾನದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿರುವ ಶ್ರೀ ವ್ಯಾಸ ಆಶ್ರಮದಲ್ಲಿರುವ ಶ್ರೀ ವ್ಯಾಸ ಮಂದಿರದಲ್ಲಿ ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಭೇಟಿ ಬಳಿಕ ವ್ಯಾಸ ಘಾಟ್ ನಲ್ಲಿ ಗಂಗಾ ದರ್ಶನ ನಡೆಸಿದರು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪೇಜಾವರ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿ ಸ್ವಾಗತಿಸಿದರು. ಪರಸ್ಪರ ಯತಿಗಳವರು ಪುಷ್ಪ ಮಾಲಾರ್ಪಣೆ ಮೂಲಕ ಅಭಿನಂದಿಸಿದರು . 

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಮಾತನಾಡುತ್ತಾ ಶ್ರೀಗಳವರ ಬಾಂಧವ್ಯ , ಸ್ನೇಹ ಕಂಡು ತುಂಬಾ ಸಂತೋಷವಾಯಿತು. ನಮ್ಮೆಲ್ಲರಿಗೂ ಮೂಲಗುರುಗಳಾದ ಮಧ್ವಾಚಾರ್ಯರಿಗೆ ಸ್ಮರಿಸುತ್ತಾ  ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರಿಗೆ ಶ್ರೀ ಗಳವರು  ಸಂಸ್ಥಾನ ಹಾಗೂ ಭಕ್ತಜನರು ಸಮರ್ಪಿಸಿದನ್ನು ಸಂತೋಷದಿಂದ ಸ್ವೀಕರಿಸಲಾಗಿದೆ. ತಮ್ಮ ಗುರುಗಳಾದ ವೃನ್ದಾವನಸ್ಥ ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥರು ಹರಿದ್ವಾರಕ್ಕೆ ಬಂದ ಸಂದರ್ಭದಲ್ಲಿ ವ್ಯಾಸಾಶ್ರಮದಲ್ಲಿರುವ ವ್ಯಾಸ ಘಾಟಿಗೆ ಬಂದು ಪುಣ್ಯ ಗಂಗಾ ಸ್ನಾನ , ಶ್ರೀ ದೇವರಿಗೆ ಪೂಜಾ ಪುರಸ್ಕಾರ ನಡೆಸುತ್ತಿದ್ದರು ಎಂದು ಸ್ಮರಿಸಿಕೊಂಡರು. 

ಈ ಸಂದರ್ಭದಲ್ಲಿ ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರರಾದ ಜಗನ್ನಾಥ್ ಶೆಣೈ , ಜಿಎಸ್ ಬಿ ಸೇವಾಮಂಡಳದ ಆರ್ . ಜಿ . ಭಟ್ , ದೆಹಲಿ ಜಿ ಎಸ್ ಬಿ ಸಮಾಜದ ಪ್ರಕಾಶ್ ಪೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು