9:19 AM Monday29 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಹಾಸನದ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಸಾವು

01/12/2024, 23:38

ಹಾಸನ(reporterkarnataka.com): ಹಾಸನ ಸಮೀಪದ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನಕ್ಕೆ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಹರ್ಷಭರ್ಜನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಡಿವೈಎಸ್ ಪಿಯಾಗಿ ನಿಯೋಜನೆಗೊಂಡ ಹರ್ಷಭರ್ಜನ್ ಡ್ಯೂಟಿ ರಿಪೋರ್ಟ್ ಮಾಡಲು ಬರುವಾಗ ಈ ದುರಂತ ನಡೆದಿದೆ. ಹರ್ಷಭರ್ಜನ್ ಅವರು ಸಂಚರಿಸುತ್ತಿದ್ದ ಜೀಪ್ ಇನ್ನೇನು ಕೆಲವೇ ನಿಮಿಷದಲ್ಲಿ ಹಾಸನ ತಲುಪ ಬೇಕೆನ್ನುವಸ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್ ನ ಟಯರ್ ಸ್ಫೋಟಗೊಂಡಿದೆ. ಸ್ಫೋಟಕದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಹರ್ಷ ಭರ್ಜನ್ ಅವರ ತಲೆಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಾಲಕ ಮಂಜೇಗೌಡರಿಗೂ ಗಾಯಗಳಾಗಿವೆ.
ಶಾಂತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು