4:33 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಹಾಸನದ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಸಾವು

01/12/2024, 23:38

ಹಾಸನ(reporterkarnataka.com): ಹಾಸನ ಸಮೀಪದ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನಕ್ಕೆ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಹರ್ಷಭರ್ಜನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಡಿವೈಎಸ್ ಪಿಯಾಗಿ ನಿಯೋಜನೆಗೊಂಡ ಹರ್ಷಭರ್ಜನ್ ಡ್ಯೂಟಿ ರಿಪೋರ್ಟ್ ಮಾಡಲು ಬರುವಾಗ ಈ ದುರಂತ ನಡೆದಿದೆ. ಹರ್ಷಭರ್ಜನ್ ಅವರು ಸಂಚರಿಸುತ್ತಿದ್ದ ಜೀಪ್ ಇನ್ನೇನು ಕೆಲವೇ ನಿಮಿಷದಲ್ಲಿ ಹಾಸನ ತಲುಪ ಬೇಕೆನ್ನುವಸ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್ ನ ಟಯರ್ ಸ್ಫೋಟಗೊಂಡಿದೆ. ಸ್ಫೋಟಕದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಹರ್ಷ ಭರ್ಜನ್ ಅವರ ತಲೆಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಾಲಕ ಮಂಜೇಗೌಡರಿಗೂ ಗಾಯಗಳಾಗಿವೆ.
ಶಾಂತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು