11:25 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಹಾಸನದ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಸಾವು

01/12/2024, 23:38

ಹಾಸನ(reporterkarnataka.com): ಹಾಸನ ಸಮೀಪದ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನಕ್ಕೆ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಹರ್ಷಭರ್ಜನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಡಿವೈಎಸ್ ಪಿಯಾಗಿ ನಿಯೋಜನೆಗೊಂಡ ಹರ್ಷಭರ್ಜನ್ ಡ್ಯೂಟಿ ರಿಪೋರ್ಟ್ ಮಾಡಲು ಬರುವಾಗ ಈ ದುರಂತ ನಡೆದಿದೆ. ಹರ್ಷಭರ್ಜನ್ ಅವರು ಸಂಚರಿಸುತ್ತಿದ್ದ ಜೀಪ್ ಇನ್ನೇನು ಕೆಲವೇ ನಿಮಿಷದಲ್ಲಿ ಹಾಸನ ತಲುಪ ಬೇಕೆನ್ನುವಸ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್ ನ ಟಯರ್ ಸ್ಫೋಟಗೊಂಡಿದೆ. ಸ್ಫೋಟಕದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಹರ್ಷ ಭರ್ಜನ್ ಅವರ ತಲೆಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಾಲಕ ಮಂಜೇಗೌಡರಿಗೂ ಗಾಯಗಳಾಗಿವೆ.
ಶಾಂತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು