10:51 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ

08/04/2024, 19:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಅಭಿಮಾನ ಆರಂಭಿಸಿದೆ. ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್ ಆಗುತ್ತಿದೆ.


*ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?.
*ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?
*ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..?
*ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ?
ಹೀಗಂತ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪ್ರಶ್ನೆ ಹಾಕಿದೆ. ಪ್ರಜ್ವಲ್ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್ ನಡೆಯುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಅಭಿಯಾನ ಕೂಡ ನಡೆಯುತ್ತಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು