12:37 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು

17/12/2024, 10:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ. ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು