7:29 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ 112 ಪೊಲೀಸರು

17/12/2024, 10:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಆದರೆ ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ 112 ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ. ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ ಎಸ್.ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕ್ಷಿಪ್ರವಾದ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು