5:44 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು