2:24 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು