8:56 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು