4:35 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು