5:38 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಹಸಿ ಕಸ, ಒಣ ಕಸ ಮನೆ ಮನೆಗಳಲ್ಲೇ ವಿಂಗಡಿಸಿ: ತ್ಯಾಜ್ಯ ಸಂಗ್ರಹಕರು ನಮ್ಮ ನಿಮ್ಮ ಹಾಗೆ ಅವರು ಕೂಡ ಮನುಷ್ಯರೇ

23/05/2021, 09:35

ಅನುಷ್ ಪಂಡಿತ್ ಮಂಗಳೂರು

ifo.reporterkarnataka@gmail.com

ಮಂಗಳೂರು ಮಹಾನಗರಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಮನೆಗಳು ಹಾಗೂ ವಾಣಿಜ್ಯ ಚಟುವಟಿಕೆಯವರ ಹಸಿ ಕಸ ಮತ್ತು ಒಣ ಕಸ ಮೂಲದಲ್ಲೇ ವಿಂಗಡಿಸಿ ಕೊಡಲು ಆದೇಶ ನೀಡಿದೆ. ಈ ಹಿಂದೆಯೂ ಇಂತಹ ಆದೇಶ ನೀಡಿ ಇನ್ನೇನು ಪೂರ್ಣ ಪ್ರಮಾಣದಲ್ಲಿ ಜಾರಿಯಾಗುತ್ತೇ ಎನ್ನುವಷ್ಟರಲ್ಲಿ ಅದನ್ನು ಕೈಬಿಟ್ಟಿತ್ತು. ಆದರೆ ಇದೀಗ ಮತ್ತೆ ಜಾರಿಗೆ ತಂದಿರುವುದು ಸ್ವಾಗತಾರ್ಹ. 

‘ಕೊಂಡೋಗುವವರಿದ್ದರೆ ಹೇಗೂ ಕೊಟ್ಟರಾಗುತ್ತದೆ’ ಎನ್ನುವುದು ಹೆಚ್ಚಿನವರ ಮನಸ್ಥಿತಿ. ಹಸಿ ಕಸದ ಜತೆಗೆ ಒಡೆದ ಗ್ಲಾಸ್, ಬಾಟಲಿ, ಸಿರಂಜಿ ಹಾಗೂ ಕೊಡಬಾರದ ವಸ್ತುಗಳನ್ನು ತೊಟ್ಟೆಯಲ್ಲಿ ಕಟ್ಟಿ ಕೊಡುತ್ತಿದ್ದರು. ಆದರೆ ಪಚ್ಚನಾಡಿ ಡಪ್ಪಿಂಗ್ ಯಾರ್ಡ್ ನಲ್ಲಿ ಮೂರು ನಾಲ್ಕು ವರ್ಷಗಳ ಹಿಂದೆ ನಡೆದ ಭೀಕರ ತ್ಯಾಜ್ಯ ದುರಂತದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಪಾಲಿಕೆಗೆ ಚಾಟಿ ಬೀಸಿತ್ತು.ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಇದೀಗ ಒಂದು ನಿರ್ಧಾರಕ್ಕೆ ಬಂದಿದೆ. ಅದೇನೆಂದರೆ ಹಸಿಕಸ ಮತ್ತು ಒಣ ಕಸವನ್ನು ಮೂಲದಲ್ಲೇ ಬೇರ್ಪಡಿಸುವುದು ಕಡ್ಡಾಯ ಎನ್ನುವುದು. ವಾರದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ಪಾಲಿಕೆಯ ತ್ಯಾಜ್ಯ ಸಂಗ್ರಹಕರು ಒಯ್ಯುತ್ತಾರೆ. ಒಣಕಸವನ್ನು ಪ್ರತಿ ಶುಕ್ರವಾರ ಕೊಂಡೋಗುತ್ತಾರೆ.


ಇದೆಲ್ಲ ನಿಜಕ್ಕೂ ಒಳ್ಳೆಯ ಕ್ರಮವೇ. ಆದರೆ ಈಗ ಸಮಸ್ಯೆ ಏನೆಂದರೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ 2-3 ದಿನಗಳಿಗೊಮ್ಮೆ ತ್ಯಾಜ್ಯ ಸಂಗ್ರಹಿಸಲಾಗುತ್ತದೆ. ಓಪನ್ ಬಕೆಟ್ ನಲ್ಲಿ ಇಟ್ಟಿರುವ ಹಸಿ ಕಸ ಕೊಳೆತು ವಾಸನೆ ಬರಲಾರಂಭಿಸುತ್ತದೆ. ಜತೆಗೆ ವಿಪರೀತ ಸೊಳ್ಳೆ ಕಾಟ ಶುರುವಾಗುತ್ತದೆ. ಕೊರೊನಾ ಜತೆಗೆ ಇಲ್ಲಿ ಮಲೇರಿಯಾ ಮತ್ತು ಡೆಂಗ್ಯು ಜ್ವರದ ವಿಪರೀತ ಕಾಟವಿದೆ. ಈ ಹಿನ್ನೆಲೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಎಲ್ಲ ಪ್ರದೇಶಗಳಿಗೂ ಪೌರಕಾರ್ಮಿಕರು/ತ್ಯಾಜ್ಯ ಸಂಗ್ರಹಕರು ಹೋಗುವ ವ್ಯವಸ್ಥೆಯನ್ನು ಪಾಲಿಕೆಯ ಆರೋಗ್ಯ ಇಲಾಖೆ ಮಾಡಬೇಕು. ಹಾಗೆ ಪೌರ ಕಾರ್ಮಿಕರಿಗೆ ಮಾಸ್ಕ್, ಗ್ಲೌಸ್, ಬೂಟು ಹಾಗೂ ಲಸಿಕೆ ಸೇರಿದಂತೆ


ಸುರಕ್ಷತೆಯ ಎಲ್ಲ ಕ್ರಮಗಳನ್ನು ಒದಗಿಸುವ ವ್ಯವಸ್ಥೆಯನ್ನು ಪಾಲಿಕೆ ಮಾಡಬೇಕು. ಹಾಗೆ ಖಾಯಂ ಪೌರ ಕಾರ್ಮಿಕರನ್ನು ಹಾಗೂ ಹೊರಗುತ್ತಿಗೆಯಲ್ಲಿ ದುಡಿಯುವ ತ್ಯಾಜ್ಯ ಸಂಗ್ರಹಕರಾದ ಪೌರ ಕಾರ್ಮಿಕರನ್ನು ಪಾಲಿಕೆ ಆಡಳಿತ ಹಾಗೂ ಸಾರ್ವಜನಿಕರು ಗೌರವದಿಂದ ಕಾಣುವುದು ಇಂದಿನ ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು