6:47 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಹಾಸನ: ಅವಾಚ್ಯ ಪದಗಳಿಂದ ಪತಿಯ ಟಾರ್ಚರ್; ಮಗುವಿನೊಂದಿಗೆ ವೀಡಿಯೋ ಮಾಡಿಟ್ಟು ಪತ್ನಿ ಸೂಸೈಡ್

19/11/2025, 11:40

ಹಾಸನ(reporterkarnataka.com): ಪತಿ ಮತ್ತು ಅತ್ತೆ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ನಡೆದಿದೆ. ಮದುವೆಯಾದಾಗಿನಿಂದಲೂ ಕಿರುಕುಳ ಕೊಡುತ್ತಿದ್ದ ಗಂಡನ ನಡತೆಯಿಂದ ಬೇಸತ್ತ ಮಹಿಳೆ ಡೆತ್ ನೋಟ್ ಬರೆದಿಟ್ಟು, ಮಗು ಜೊತೆ ವಿಡಿಯೋ ಮಾಡಿ ನದಿಗೆ ಹಾರಿದ್ದಾರೆ. ಪೊಲೀಸರ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸಾಲಿಗ್ರಾಮ ಮೂಲದ ಮಹಾದೇವಿ (29)ಸುಮಾರು ಮೂರು ವರ್ಷಗಳ ಹಿಂದೆ ಸೀಬಳ್ಳಿ ಗ್ರಾಮದ ಕುಮಾರ್ ಜೊತೆ ವಿವಾಹವಾಗಿದ್ದರು. ಮದುವೆಯ ನಂತರದಿಂದಲೇ ಪತಿ ಅನುಮಾನಪಟ್ಟು ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಲಾಗಿದೆ. ಪತಿಯ ಕಿರುಕುಳ ತಾಳಲಾರದೆ 15 ದಿನಗಳ ಹಿಂದೆ ತವರು ಮನೆ ಸೇರಿದ್ದ ಅವರಿಗೆ ಫೋನ್ ಮತ್ತು ಮೆಸೇಜ್ ಮೂಲಕ ಕುಮಾರ್ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಲೇ ಇದ್ದ ಎಂದು ತಿಳಿದುಬಂದಿದೆ. ನವೆಂಬರ್ 14ರಂದು ಪತಿ ವಿರುದ್ಧ ದೂರು ನೀಡುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಾದೇವಿ, ಇದೀಗ ತನ್ನ ಪತಿ ಮತ್ತು ಅತ್ತೆಯೇ ತನ್ನ ಸಾವಿಗೆ ಕಾರಣವೆಂದು ಹೇಳಿ ಸೆಲ್ಫಿ ವೀಡಿಯೋ ಮಾಡಿ, ಡೆತ್‌ನೋಟ್ ಬರೆದು, ಮಗಳೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ ತಾನು ಮಾಡಿದ ವೀಡಿಯೋದಲ್ಲಿ ನನ್ನ ಪತಿ ಮತ್ತು ಅತ್ತೆಯೇ ನನ್ನ ಸಾವಿಗೆ ಕಾರಣ, ನನ್ನ ಕುಟುಂಬದವರಿಗೆ ಆತ ಜೀವ ಬೆದರಿಕೆ ಹಾಕಿದ್ದಾನೆ. ಹೀಗಿರುವಾಗ ನಾನು ಏಕೆ ಬದುಕಿರಬೇಕು ಎಂದು ತಮ್ಮ ನೋವು ಹೇಳಿಕೊಂಡಿದ್ದಾರೆ. ಬೆಟ್ಟಸೋಗೆ ಬಳಿಯ ನದಿಯಲ್ಲಿ ಮಹಾದೇವಿಯ ಮೃತದೇಹ ಪತ್ತೆಯಾಗಿದ್ದು, ಮಗುವಿನ ಹುಡುಕಾಟ ಮುಂದುವರಿದಿದೆ. ಪತಿ ಮತ್ತು ಅತ್ತೆಯ ಕಿರುಕುಳ ತಾಳಲಾರದೆ ದೂರು ನೀಡಲು ಬಂದ ಮಹಾದೇವಿಯನ್ನು ಪೊಲೀಸರು ಹೆದರಿಸಿ ವಾಪಾಸ್ ಕಳುಹಿಸಿದ್ದರು ಎಂದು ಮಹಾದೇವಿ ತಮ್ಮ ಹೇಳಿದ್ದು, ಪೊಲೀಸರ ನಿರ್ಲಕ್ಷ್ಯವೆ ಅಕ್ಕನ ಸಾವಿಗೆ ಕಾರಣವಾಗಿದೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು