1:37 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ  ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ

18/02/2022, 10:39

ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಪ್ರಾರಂಭಿಸಲಾಗುತ್ತಿದೆ. 

ಮಂಗಳೂರಿನಿಂದ ಸಂಜೆ 5ಕ್ಕೆ ಹೊರಟು ಹಾಸನಕ್ಕೆ ರಾತ್ರಿ 9.30ಕ್ಕೆ ತಲುಪಲಿದೆ. ಅದೇ ರೀತಿ ಹಾಸನದಿಂದ  ಮುಂಜಾನೆ 5.15 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ 9.45ಕ್ಕೆ ತಲುಪಲಿದೆ. ಬಸ್ ದರ  320 ರೂ.ಗಳು.

ಮಂಗಳೂರು-ಶಿರಸಿ ವಯಾ ಉಡುಪಿ-ಕುಂದಾಪುರ-ಭಟ್ಕಳ-ಮುರ್ಡೇಶ್ವರ ಕ್ರಾಸ್-ಹೊನ್ನಾವರ ಸರ್ಕಲ್-ಕುಮಟ ಮಾರ್ಗದಲ್ಲಿ ನೂತನವಾಗಿ ವೋಲ್ವೋ ಸಾರಿಗೆಯನ್ನು  ಇದೇ ಫೆ.18ರ ಶುಕ್ರವಾರದಿಂದ ಪ್ರಾರಂಭಿಸಲಾಗುವುದು.

ಮಂಗಳೂರಿನಿಂದ ಮಧ್ಯಾಹ್ನ 3.15 ಹೊರಟು ಶಿರಸಿಗೆ ರಾತ್ರಿ 9.30ಗಂಟೆಗೆ ತಲುಪಲಿದೆ. ಶಿರಸಿಯಿಂದ ಮುಂಜಾನೆ 5 ಗಂಟೆಗೆ ಹೊರಟು ಮಂಗಳೂರನ್ನು ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಬಸ್ ದರ 420 ರೂ.ಗಳಾಗಿವೆ.  

     ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

  ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ: 7760990720, ಹಾಸನ ಬಸ್ ನಿಲ್ದಾಣ: 7760990520, ಸಕಲೇಶಪುರ ಬಸ್ ನಿಲ್ದಾಣ: 7022030210, ಉಡುಪಿ ಬಸ್ ನಿಲ್ದಾಣ: 9663266400, ಕುಂದಾಪುರ ಬಸ್ ನಿಲ್ದಾಣ: 9663266009, ಕುಮಟ ಬಸ್ ನಿಲ್ದಾಣ: 7760991730, ಶಿರಸಿ: 7795984168, ಮಂಗಳೂರು ಘಟಕ: 7760990714/7760990728, ಅವತಾರ್: ಮಂಗಳೂರು-9663211553 ಮೊಬೈಲ್ ನಂಬರ್‍ಗಳನ್ನು ಸಂಪರ್ಕಿಸುವಂತೆ ಕರಾರಸಾಸಂಸ್ಥೆಯ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು