5:31 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ  ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ

18/02/2022, 10:39

ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಪ್ರಾರಂಭಿಸಲಾಗುತ್ತಿದೆ. 

ಮಂಗಳೂರಿನಿಂದ ಸಂಜೆ 5ಕ್ಕೆ ಹೊರಟು ಹಾಸನಕ್ಕೆ ರಾತ್ರಿ 9.30ಕ್ಕೆ ತಲುಪಲಿದೆ. ಅದೇ ರೀತಿ ಹಾಸನದಿಂದ  ಮುಂಜಾನೆ 5.15 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ 9.45ಕ್ಕೆ ತಲುಪಲಿದೆ. ಬಸ್ ದರ  320 ರೂ.ಗಳು.

ಮಂಗಳೂರು-ಶಿರಸಿ ವಯಾ ಉಡುಪಿ-ಕುಂದಾಪುರ-ಭಟ್ಕಳ-ಮುರ್ಡೇಶ್ವರ ಕ್ರಾಸ್-ಹೊನ್ನಾವರ ಸರ್ಕಲ್-ಕುಮಟ ಮಾರ್ಗದಲ್ಲಿ ನೂತನವಾಗಿ ವೋಲ್ವೋ ಸಾರಿಗೆಯನ್ನು  ಇದೇ ಫೆ.18ರ ಶುಕ್ರವಾರದಿಂದ ಪ್ರಾರಂಭಿಸಲಾಗುವುದು.

ಮಂಗಳೂರಿನಿಂದ ಮಧ್ಯಾಹ್ನ 3.15 ಹೊರಟು ಶಿರಸಿಗೆ ರಾತ್ರಿ 9.30ಗಂಟೆಗೆ ತಲುಪಲಿದೆ. ಶಿರಸಿಯಿಂದ ಮುಂಜಾನೆ 5 ಗಂಟೆಗೆ ಹೊರಟು ಮಂಗಳೂರನ್ನು ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಬಸ್ ದರ 420 ರೂ.ಗಳಾಗಿವೆ.  

     ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

  ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ: 7760990720, ಹಾಸನ ಬಸ್ ನಿಲ್ದಾಣ: 7760990520, ಸಕಲೇಶಪುರ ಬಸ್ ನಿಲ್ದಾಣ: 7022030210, ಉಡುಪಿ ಬಸ್ ನಿಲ್ದಾಣ: 9663266400, ಕುಂದಾಪುರ ಬಸ್ ನಿಲ್ದಾಣ: 9663266009, ಕುಮಟ ಬಸ್ ನಿಲ್ದಾಣ: 7760991730, ಶಿರಸಿ: 7795984168, ಮಂಗಳೂರು ಘಟಕ: 7760990714/7760990728, ಅವತಾರ್: ಮಂಗಳೂರು-9663211553 ಮೊಬೈಲ್ ನಂಬರ್‍ಗಳನ್ನು ಸಂಪರ್ಕಿಸುವಂತೆ ಕರಾರಸಾಸಂಸ್ಥೆಯ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು