1:45 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ  ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ

18/02/2022, 10:39

ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಪ್ರಾರಂಭಿಸಲಾಗುತ್ತಿದೆ. 

ಮಂಗಳೂರಿನಿಂದ ಸಂಜೆ 5ಕ್ಕೆ ಹೊರಟು ಹಾಸನಕ್ಕೆ ರಾತ್ರಿ 9.30ಕ್ಕೆ ತಲುಪಲಿದೆ. ಅದೇ ರೀತಿ ಹಾಸನದಿಂದ  ಮುಂಜಾನೆ 5.15 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ 9.45ಕ್ಕೆ ತಲುಪಲಿದೆ. ಬಸ್ ದರ  320 ರೂ.ಗಳು.

ಮಂಗಳೂರು-ಶಿರಸಿ ವಯಾ ಉಡುಪಿ-ಕುಂದಾಪುರ-ಭಟ್ಕಳ-ಮುರ್ಡೇಶ್ವರ ಕ್ರಾಸ್-ಹೊನ್ನಾವರ ಸರ್ಕಲ್-ಕುಮಟ ಮಾರ್ಗದಲ್ಲಿ ನೂತನವಾಗಿ ವೋಲ್ವೋ ಸಾರಿಗೆಯನ್ನು  ಇದೇ ಫೆ.18ರ ಶುಕ್ರವಾರದಿಂದ ಪ್ರಾರಂಭಿಸಲಾಗುವುದು.

ಮಂಗಳೂರಿನಿಂದ ಮಧ್ಯಾಹ್ನ 3.15 ಹೊರಟು ಶಿರಸಿಗೆ ರಾತ್ರಿ 9.30ಗಂಟೆಗೆ ತಲುಪಲಿದೆ. ಶಿರಸಿಯಿಂದ ಮುಂಜಾನೆ 5 ಗಂಟೆಗೆ ಹೊರಟು ಮಂಗಳೂರನ್ನು ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಬಸ್ ದರ 420 ರೂ.ಗಳಾಗಿವೆ.  

     ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

  ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ: 7760990720, ಹಾಸನ ಬಸ್ ನಿಲ್ದಾಣ: 7760990520, ಸಕಲೇಶಪುರ ಬಸ್ ನಿಲ್ದಾಣ: 7022030210, ಉಡುಪಿ ಬಸ್ ನಿಲ್ದಾಣ: 9663266400, ಕುಂದಾಪುರ ಬಸ್ ನಿಲ್ದಾಣ: 9663266009, ಕುಮಟ ಬಸ್ ನಿಲ್ದಾಣ: 7760991730, ಶಿರಸಿ: 7795984168, ಮಂಗಳೂರು ಘಟಕ: 7760990714/7760990728, ಅವತಾರ್: ಮಂಗಳೂರು-9663211553 ಮೊಬೈಲ್ ನಂಬರ್‍ಗಳನ್ನು ಸಂಪರ್ಕಿಸುವಂತೆ ಕರಾರಸಾಸಂಸ್ಥೆಯ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು