11:23 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

30/05/2021, 14:26

ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 ಕೆಜಿ ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ. ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಅವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು