2:11 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

30/05/2021, 14:26

ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 ಕೆಜಿ ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ. ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಅವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು