12:50 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

30/05/2021, 14:26

ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 ಕೆಜಿ ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ. ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಅವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು