2:40 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

30/05/2021, 14:26

ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ ಹಿರಿಯಡ್ಕ ಪರಿಸರದ ಸುಮಾರು 20 ಕುಟುಂಬಗಳಿಗೆ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ತಲಾ 10 ಕೆಜಿ ಅಕ್ಕಿ ಹಾಗೂ ಒಂದು ಸಾವಿರ ರೂಪಾಯಿ ಮೌಲ್ಯದ ಅಗತ್ಯ ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ ಕುಟುಂಬಗಳು ಬಹಳ ಕಷ್ಟದಲ್ಲಿದೆ. ಹಾಗಾಗಿ ಅವರ ಕಷ್ಟದ ಸಮಯದಲ್ಲಿ ಅವರು ನೇಮ ಕಟ್ಟುವ ಮನೆಯವರು ಅವರೊಂದಿಗಿದ್ದು ಅವರ ಕಷ್ಟದಲ್ಲಿ ಭಾಗಿಗಳಾಗಬೇಕೆಂದು ಆಶಿಸಿ ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಅವರು ಆಹಾರ ಕಿಟ್ ಗಳನ್ನು ವಿತರಿಸಿದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಅನಿಲ್ ಆಚಾರ್ಯ ಓಂತಿಬೆಟ್ಟು , ಪುನೀತ್ ಕುಲಾಲ್ ಮಜೂರು , ವಿಕಾಸ್ ದೇವಾಡಿಗ ಮಜೂರು , ಶಿವು ಮಜೂರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು