7:39 PM Saturday7 - February 2026
ಬ್ರೇಕಿಂಗ್ ನ್ಯೂಸ್
NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

ಇತ್ತೀಚಿನ ಸುದ್ದಿ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ ಪ್ರತಿಭಟನೆ

15/01/2025, 18:58

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ನಡೆದ ಗೋ ಹಿಂಸೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬಳ್ಳಾರಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಸೇರಿದ ರೈತ ಮೋರ್ಚಾದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಚಾಮರಾಜ ಪೇಟೆಯ ಶಾಸಕರೂ ಆಗಿರುವ, ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಭಾವಚಿತ್ರಕ್ಕೆ ಸಗಣಿ ಬಳಿದ ಕಾರ್ಯಕರ್ತರು, ಗೋಮೂತ್ರ ಸುರಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ ಐನಾಥ ರೆಡ್ಡಿ, ‘ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಆಕಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ. ಘಟನೆಗೆ ಸಚಿವ ಜಮೀರ್ ಅವರ ಮೃದು ಧೋರಣೆಯೇ ಪರೋಕ್ಷವಾಗಿ ಕಾರಣವಾಗಿದೆ. ಭಾರತದಲ್ಲಿ ಆಕಳನ್ನು ಕಾಮಧೇನು ಎನ್ನಲಾಗುತ್ತದೆ. ಅವುಗಳ ಮೇಲಿನ ದಾಳಿ ಅಮಾನವೀಯ ಮತ್ತು ಖಂಡನೀಯ’ ಎಂದರು.
‘ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಆದರೆ, ಯಾವ ಪಾಪಕ್ಕಾಗಿ ಮೂಕ ಪ್ರಾಣಿಗಳ ಮೇಲೆ ಸೇಡು. ಇದು ಒಬ್ಬಿಬ್ಬರು ಮಾಡಿರುವ ಕೆಲಸವಲ್ಲ. ಘಟನೆಯ ಹಿಂದಿರುವವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹಮದ್‌ ಖಾನ್‌ ವಿಫಲರಾಗಿದ್ದಾರೆ ಎಂದೂ ಅವರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು