11:13 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ ಪ್ರತಿಭಟನೆ

15/01/2025, 18:58

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ನಡೆದ ಗೋ ಹಿಂಸೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬಳ್ಳಾರಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಸೇರಿದ ರೈತ ಮೋರ್ಚಾದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಚಾಮರಾಜ ಪೇಟೆಯ ಶಾಸಕರೂ ಆಗಿರುವ, ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಭಾವಚಿತ್ರಕ್ಕೆ ಸಗಣಿ ಬಳಿದ ಕಾರ್ಯಕರ್ತರು, ಗೋಮೂತ್ರ ಸುರಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ ಐನಾಥ ರೆಡ್ಡಿ, ‘ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಆಕಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ. ಘಟನೆಗೆ ಸಚಿವ ಜಮೀರ್ ಅವರ ಮೃದು ಧೋರಣೆಯೇ ಪರೋಕ್ಷವಾಗಿ ಕಾರಣವಾಗಿದೆ. ಭಾರತದಲ್ಲಿ ಆಕಳನ್ನು ಕಾಮಧೇನು ಎನ್ನಲಾಗುತ್ತದೆ. ಅವುಗಳ ಮೇಲಿನ ದಾಳಿ ಅಮಾನವೀಯ ಮತ್ತು ಖಂಡನೀಯ’ ಎಂದರು.
‘ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಆದರೆ, ಯಾವ ಪಾಪಕ್ಕಾಗಿ ಮೂಕ ಪ್ರಾಣಿಗಳ ಮೇಲೆ ಸೇಡು. ಇದು ಒಬ್ಬಿಬ್ಬರು ಮಾಡಿರುವ ಕೆಲಸವಲ್ಲ. ಘಟನೆಯ ಹಿಂದಿರುವವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹಮದ್‌ ಖಾನ್‌ ವಿಫಲರಾಗಿದ್ದಾರೆ ಎಂದೂ ಅವರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು