1:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ

25/01/2025, 15:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನವರಿ 26ರಿಂದ 31ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು.
ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು.
ಇಂದು ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ.


ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ ಕ್ವಿಂಟಾಲ್ ಅಕ್ಕಿ, 250 ಕ್ವಿಂಟಾಲ್ ಬೇಳೆ, 200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆಜಿ ತುಪ್ಪ, ಸಾವಿರಾರು ಕ್ವಿಂಟಲ್ ತರಕಾರಿ ಸೇರಿದಂತೆ ಅಡುಗೆ ಸಾಮಾಗ್ರಿ ದಾಸ್ತಾನು ಮಾಡಿಕೊಳ್ಳಲಾಗಿದೆ.
ಇದರಿಂದಾಗಿ ಪ್ರತಿನಿತ್ಯ ಬಗೆ ಬಗೆಯ ಸಿಹಿಯು ಸೇರಿದಂತೆ ಲಕ್ಷಾಂತರ ಮಂದಿಗೆ ತ್ರಿಕಾಲ ದಾಸೋಹ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು, ಮಠದ ಕಾರ್ಯದರ್ಶಿಗಳಾದ ಮಂಜುನಾಥ ಸ್ವಾಮಿ, ಉದಯಕುಮಾರ್, ಶಿವಕುಮಾರ್, ಮಹಾ ದಾಸೋಹ ವ್ಯವಸ್ಥಾಪಕರಾದ ಸುಬ್ಬಪ್ಪ, ಸೇರಿದಂತೆ ಹಲವು ಮಠಾಧೀಶರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು