12:53 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಹತ್ತಿ ಬಟ್ಟೆ ಸೀರೆ ನೇಯ್ಗೆ: ಸಂಜೀವ ಶೆಟ್ಟಿಗಾರ್ ಅವರಿಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ; ಆಗಸ್ಟ್ 7ರಂದು ಪ್ರದಾನ

06/08/2023, 11:28

ಮಂಗಳೂರು(reporterkarnataka.com): ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು..
ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
74 ವಯಸ್ಸಿನ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ ನೇಯುವಲ್ಲಿ ಪರಿಣಿತರು. 80 ಕೌಂಟ್ ನ ಸಹಜ ಸೀರೆ ನೇಯ್ದ ಮೊದಲಿಗರು. ಕದಿಕೆ ಟ್ರಸ್ಟ್ ಇಪ್ಪತ್ತು ವರುಷದ ನಂತರ ಗೋಪಿನಾಥ್ ಶೆಟ್ಟಿಗಾರ್ ಅವರ ನೆರವಿನಲ್ಲಿ ಪರಿಚಯಿಸಿದ ಇಕತ್ ಸೀರೆಯನ್ನು ಯಾವುದೇ ಹಿಂಜರಿಕೆ ತೋರಿಸದೆ ಮೊದಲು ನೇಯ್ದವರು. ನೇಕಾರಿಕೆ ಮತ್ತು ಅದರ ಪೂರ್ವ ತಯಾರಿಕೆಯ ಕೆಲಸದಲ್ಲಿ ಅತ್ಯಾಪೂರ್ವ ಪರಿಣತಿ ಹೊಂದಿರುವ ಸಂಜೀವ ಶೆಟ್ಟಿಗಾರ್, ಎರಡು ಹಾಸುಗಳನ್ನು ಒಂದೇ ಕೈಯಿಂದ ಜೋಡಿಸುವ ಅಪರೂಪದ ಕುಶಲತೆ ಹೊಂದಿದ್ದಾರೆ. ಇವರ ಸಂದು ಹಾಕುವ ಈ ಕೆಲಸ ನೋಡುವುದೇ ಕಣ್ಣಿಗೆ ಒಂದು ಹಬ್ಬ. ಸಾಂಪ್ರದಾಯಿಕ ಮತ್ತು ಆಧುನಿಕ ಎರಡೂ ಶೈಲಿಯ ಸೀರೆಗಳನ್ನು ಬಣ್ಣಗಳನ್ನು ಸರಿಯಾಗಿ ಹೊಂದಿಸಿ ಬೇಡಿಕೆಗೆ ಸರಿಯಾಗಿ ಈ 72ರ ವಯಸ್ಸಿನಲ್ಲೂ ನೇಯಬಲ್ಲ ಪ್ರಯೋಗಶೀಲ ಮನಸ್ಸು ಹೊಂದಿದ್ದಾರೆ. ಒಂದೇ ಹಾಸಿನಲ್ಲಿ ವಿವಿಧ ವಿನ್ಯಾಸದ ಸೀರೆ ನೆಯಬಲ್ಲರು. ಸದಾ ಹಸನ್ಮುಖರಾಗಿ ತಮ್ಮ ಕುಶಲತೆಯನ್ನು ಕಿರಿಯರಿಗೆ ಕಲಿಸುವ ಸಂಜೀವ ಶೆಟ್ಟಿಗಾರ್ ಎಲ್ಲರಿಗೂ ಅಚ್ಚುಮೆಚ್ಚು.
ಕದಿಕೆ ಟ್ರಸ್ಟ್ ಆರಂಭಿಸಿದ ಉಡುಪಿ ಸೀರೆ ಉಳಿಸಿ ಅಭಿಯಾನದ ನಂತರ ತಾಳಿಪಾಡಿ ನೇಕಾರರ ಸಂಘವನ್ನು ಸೇರಿದ ಶ್ರೀ ಸಂಜೀವ ಶೆಟ್ಟಿಗಾರ್ ಅನೇಕ ವರುಷಗಳ ಕಾಲ ಉಡುಪಿ ನೇಕಾರರ ಸಂಘದಲ್ಲಿ ಸೇವೆ ಸಲ್ಲಿಸಿದ್ದರು.
ಸಂಜೀವ ಶೆಟ್ಟಿಗಾರ್ ಅವರಿಗೆ ಅಭಿನಂದನೆಗಳು. ಅವರು ಇನ್ನೂ ಹಲವು ವರುಷಗಳ ಕಾಲ ಕಿರಿಯರನ್ನು ಪ್ರೋತ್ಸಾಹಿಸುತ್ತಾ ನೇಕಾರಿಕಾ ಕಾಯಕದಲ್ಲಿ ತೊಡಗಲಿ ಎನ್ನುವುದು ಕದಿಕೆ ಟ್ರಸ್ಟ್ ನ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು