9:13 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಹಟ್ಟಿ ಚಿನ್ನದ ಗಣಿಯಲ್ಲಿ ಮುಂಜಾನೆ ಭಾರೀ ಭೂಕುಸಿತ: ಓರ್ವ ಸಾವು; 3 ಮಂದಿ ಗಂಭೀರ

12/07/2024, 11:26

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕುಸಿತವಾಗಿದೆ. ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ದುರ್ಘಟನೆ ಸಂಭವಿಸಿದೆ. ಮೌನೇಶ್ ಎನ್ನುವ ಕಾರ್ಮಿಕ ಸಾವಗೀಡಾಗಿದ್ದಾನೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಧಿವಶರಾದ ಕಾರ್ಮಿಕನನ್ನು ಮೌನೇಶ್ ಎಂದು ಗುರುತಿಸಲಾಗಿದೆ. ‌ಬೂದಿಬಸವ, ರಂಗಸ್ವಾಮಿ ಹಾಗೂ ಮತ್ತುವೋರು ಗಂಭೀರ ಗಾಯಗೊಂಡ ಕಾರ್ಮಿಕರು.

ಇತ್ತೀಚಿನ ಸುದ್ದಿ

ಜಾಹೀರಾತು