12:23 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಟ್ಟಿ ಚಿನ್ನದ ಗಣಿಯಲ್ಲಿ ಮುಂಜಾನೆ ಭಾರೀ ಭೂಕುಸಿತ: ಓರ್ವ ಸಾವು; 3 ಮಂದಿ ಗಂಭೀರ

12/07/2024, 11:26

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕುಸಿತವಾಗಿದೆ. ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ದುರ್ಘಟನೆ ಸಂಭವಿಸಿದೆ. ಮೌನೇಶ್ ಎನ್ನುವ ಕಾರ್ಮಿಕ ಸಾವಗೀಡಾಗಿದ್ದಾನೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಧಿವಶರಾದ ಕಾರ್ಮಿಕನನ್ನು ಮೌನೇಶ್ ಎಂದು ಗುರುತಿಸಲಾಗಿದೆ. ‌ಬೂದಿಬಸವ, ರಂಗಸ್ವಾಮಿ ಹಾಗೂ ಮತ್ತುವೋರು ಗಂಭೀರ ಗಾಯಗೊಂಡ ಕಾರ್ಮಿಕರು.

ಇತ್ತೀಚಿನ ಸುದ್ದಿ

ಜಾಹೀರಾತು