10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಪ್ರವೀಣ್ ಮನೆಗೆ ಭೇಟಿ: ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಕೂಗಿದ ಸ್ಥಳೀಯರು

31/07/2022, 19:19

ಪುತ್ತೂರು(reporterkarnataka.com): ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬಸ್ಥರನ್ನು ಭೇಟಿಯಾಗಲು ಬಂದ ಕಾಂಗ್ರೆಸ್ ನಾಯಕರಿಗೆ ಸ್ಥಳೀಯರು ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ಪ್ರವೀಣ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಿಗೆ ಸ್ಥಳೀಯರು ಧಿಕ್ಕಾರ ಕೂಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಮೇಯರ್ ಕವಿತಾ ಸನಿಲ್ ಸೇರಿ ಹಲವು ಮುಖಂಡರು ಭೇಟಿ ನೀಡಿದ್ದರು.

ಈ ವೇಳೆ ಕಾಂಗ್ರೆಸ್ ನಾಯಕರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರವೀಣ್ ಸಂಬಂಧಿಕರು ಮೊನ್ನೆ ಬಾರದವರು ಇಂದೇಕೆ ಬಂದಿದ್ದು? ಆರೋಪಿಗಳಿಗೆ ಜಾಮೀನು ನೀಡುವವರು ಕೂಡಾ ರಾಜಕೀಯದವರೇ ಎಂದು ಪ್ರಶ್ನಿಸಿದರು.

ಇದೇ ವೇಳೆ ತಮ್ಮ ಮನೆಯಿಂದ ಹೊರಗೆ ಹೋಗುವಂತೆ ಕುಟುಂಬಸ್ಥರು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು