1:11 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವಿನ ಸೆರೆ: ಕಳಸದಲ್ಲಿ ಕಂಡು ಬಂದ ಅಳಿವಿನಂಚಿನಲ್ಲಿರುವ ಉರಗ

07/10/2023, 23:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಇದು ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವವು ಆಗಿದೆ.
ಪಶ್ಚಿಮ ಘಟ್ಟದಲ್ಲಿರುವ ಅಳಿವಿನಂಚಿನ ಉರಗದ ಸಂತತಿಗೆ ಇದು ಸೇರುತ್ತದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದಾಗಿದೆ.


ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಈ ಅಪರೂಪದ ಹಾವನ್ನು ಹಿಡಿಯಲಾಗಿದೆ.
ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿದ್ದ ಬ್ಯಾಂಬೋ ಪಿಟ್ ವೈಫರ್ ಹಾವು ಕಂಡು ಬಂದಿತ್ತು.
ಹೆಚ್ಚಾಗಿ ಈ ಹಾವು ಬಿದಿರಿನ ಬಂಬಿನಲ್ಲಿ ವಾಸವಿರುವ ಕಾರಣ ಬ್ಯಾಂಬೋ ಪಿಟ್ ವೈಫರ್ ಹಾವು ಎಂದು ಕರೆಯುತ್ತಾರೆ.
ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ
ಸ್ಥಳಿಯರು ಖುಷಿ ಪಟ್ಟಿದ್ದಾರೆ.ಅಪರೂಪದ ಹಾವನ್ನ ಸೆರೆ ಹಿಡಿದ ರಿಜ್ವಾನ್ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು