7:52 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

01/01/2025, 21:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪರವಾನಗಿ (FSSA ಲೈಸೆನ್ಸ್ ) ಇಲ್ಲದೆ, ಹೋಟೆಲ್, ಬೇಕರಿ ಮತ್ತು ತಿಂಡಿ ಆಹಾರ ಪದಾರ್ಥಗಳನ್ನು ತಯಾರಿಸುವ ಅಂಗಡಿ ಮತ್ತು ಗೋಡೌನ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೆನ್ನೆ ಮೊನ್ನೆ ತಯಾರಿಸಿರುವ ತಿಂಡಿ ಪದಾರ್ಥಗಳು, ಆಹಾರವನ್ನು ನೀಡಬಾರದು, ತಿಂಡಿ ಮತ್ತು ಆಹಾರ ಪದಾರ್ ಗಳನ್ನು ಮಾಡಿದ ನಂತರ ಅವುಗಳನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಮತ್ತು ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು, ಮತ್ತು ಆವಾಗ ಆವಾಗ ಜಾಗವನ್ನು ಫಿನಾಯಿಲ್ ನಿಂದ ಸ್ವಚ್ಛಗೊಳಿಸಬೇಕು, ಘನತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯವರು ನೇಮಿಸಿರುವ ವಾಹನಕ್ಕೆ ಮಾತ್ರ ನೀಡಬೇಕು,
ರಸ್ತೆ,ಬದಿ, ಕೆರೆ, ಕಟ್ಟೆ ,ನದಿಗಳಲ್ಲಿ ಬಿಸಾಡಬಾರದು ಹಾಗೂ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು, ಮತ್ತು ವ್ಯಾಪಾರಸ್ಥರು 1 ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಿಗೆ (ಲೈಸೆನ್ಸ್) ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿ ನೋಟಿಸ್ ನೀಡಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ , ಚೌಡ ನಾಯ್ಕ, ಮುಖಂಡರಾದ ಸುರೇಶ್ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು