1:26 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

01/01/2025, 21:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪರವಾನಗಿ (FSSA ಲೈಸೆನ್ಸ್ ) ಇಲ್ಲದೆ, ಹೋಟೆಲ್, ಬೇಕರಿ ಮತ್ತು ತಿಂಡಿ ಆಹಾರ ಪದಾರ್ಥಗಳನ್ನು ತಯಾರಿಸುವ ಅಂಗಡಿ ಮತ್ತು ಗೋಡೌನ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೆನ್ನೆ ಮೊನ್ನೆ ತಯಾರಿಸಿರುವ ತಿಂಡಿ ಪದಾರ್ಥಗಳು, ಆಹಾರವನ್ನು ನೀಡಬಾರದು, ತಿಂಡಿ ಮತ್ತು ಆಹಾರ ಪದಾರ್ ಗಳನ್ನು ಮಾಡಿದ ನಂತರ ಅವುಗಳನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಮತ್ತು ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು, ಮತ್ತು ಆವಾಗ ಆವಾಗ ಜಾಗವನ್ನು ಫಿನಾಯಿಲ್ ನಿಂದ ಸ್ವಚ್ಛಗೊಳಿಸಬೇಕು, ಘನತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯವರು ನೇಮಿಸಿರುವ ವಾಹನಕ್ಕೆ ಮಾತ್ರ ನೀಡಬೇಕು,
ರಸ್ತೆ,ಬದಿ, ಕೆರೆ, ಕಟ್ಟೆ ,ನದಿಗಳಲ್ಲಿ ಬಿಸಾಡಬಾರದು ಹಾಗೂ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು, ಮತ್ತು ವ್ಯಾಪಾರಸ್ಥರು 1 ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಿಗೆ (ಲೈಸೆನ್ಸ್) ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿ ನೋಟಿಸ್ ನೀಡಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ , ಚೌಡ ನಾಯ್ಕ, ಮುಖಂಡರಾದ ಸುರೇಶ್ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು