7:24 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

HDK | ಮುಸ್ಲಿಮರಿಗೆ ಶೇ. 4 ಗುತ್ತಿಗೆ ಮೀಸಲಾತಿ ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಭಿನ್ನಾಭಿಪ್ರಾಯ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

24/03/2025, 18:35

ನವದೆಹಲಿ(reporterkarnataka.com): ರಾಜ್ಯ ಸರಕಾರ ಮುಸ್ಲಿಮರಿಗೆ ಶೇ. 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್ ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ.
ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ.
ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ನ ಅಚಲ ನಿಲುವು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು