3:17 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು ಹೋದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ

12/05/2025, 22:38

ಉಡುಪಿ(reporterkarnataka.com): ಜೀ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ – 3ರ ವಿಜೇತ, ಚಲನಚಿತ್ರ ನಟ ರಾಕೇಶ್ ಪೂಜಾರಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಹುಟ್ಟೂರು ಉಡುಪಿ ಜಿಲ್ಲೆಯ ಹೂಡೆಯಲ್ಲಿ ಲಕ್ಷಾಂತರ ಅಭಿಮಾನಿಗಳ ಕಣ್ಣೀರ ನಡುವೆ ನಡೆಯಿತು.
ರಾಕೇಶ್ ಪೂಜಾರಿ ಅವರು ನಿನ್ನೆ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಸಿ ಕಾರ್ಕಳದ ಗೆಳೆಯನ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೆಹಂದಿಯಲ್ಲಿ ಗೆಳೆಯರ ಜತೆ ಡ್ಯಾನ್ಸ್ ಮಾಡುತ್ತಿದ್ದಾಗ ಲೋ ಬಿಪಿಗೆ ಒಳಗಾಗಿ ಹೃದಯಾಘಾತಕ್ಕೀಡಾದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಸುಮಾರು 3 ಗಂಟೆಗೆ ಕೊನೆಯುಸಿರೆಳೆದರು.


32ರ ಹರೆಯದ ರಾಕೇಶ್ ಅವರು ಕಾಮಿಡಿ ಕಿಲಾಡಿಯ ಮೂಲಕ ಕರ್ನಾಟಕದ ಜನರ ಮನ ಗೆದ್ದಿದ್ದರು. ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ರಾಕೇಶ್ ಅವರ ಅಂತ್ಯಕ್ರಿಯಲ್ಲಿ ಖ್ಯಾತ ನಟಿ ರಕ್ಷಿತಾ, ನಟರಾದ ಮಾ. ಆನಂದ್, ನಯನಾ, ಶಿವರಾಜ್ ಕೆ.ಆರ್. ಪೇಟೆ ಸೇರಿದಂತೆ ಕಿರುತೆರೆಯ ತಾರೆಯರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು