7:09 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Health | ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

12/05/2025, 21:45

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌


ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.‌ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಸಚಿವರು, ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಿ ಎಂದರು.
ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಜೀವಸಾರ್ಥಕತೆ ಸೊಸೈಟಿಯ ನೋಂದಣಿಯನ್ನು ನವೀಕರಿಸಲಾಗುವುದು ಮತ್ತು ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು