5:22 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Health | ಸರಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯಕ್ಕೆ ಕ್ರಮ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

19/05/2025, 14:54

ಬೆಂಗಳೂರು(reporterkarnataka.com): ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಿಸಿದರು.
ಸ್ಪರ್ಶ್‌ ಆಸ್ಪತ್ರೆ ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್‌ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು,ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ ಕಿಮೋಥೆರಪಿಯನ್ನೂ ಸಹ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲು ಮುಂದಾಗಿದ್ದು, ಶೀಘ್ರವೇ ಈ ಸೇವೆಗೆ ಚಾಲನೆ ಸಿಗಲಿದೆ ಎಂದರು.


ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ ಎಂದು ತಿಳಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್‌ ಮಾತನಾಡಿ, ನಮ್ಮ ರಾಜ್ಯದಲ್ಲಿ ಬಡ ಮಕ್ಕಳೂ ಸಹ ವೈದ್ಯರಾಗಬೇಕು ಎಂಬ ಕನಸನ್ನು ನನಸು ಮಾಡಲು, ಸರ್ಕಾರಿ ಕೋಟಾದಡಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಿಸಿದ್ದೇವೆ. ಇತರೆ ರಾಜ್ಯಗಳಿ ಹೋಲಿಸಿದರೆ ನಮ್ಮಲ್ಲಿಯೇ ಹೆಚ್ಚು ಸರ್ಕಾರಿ ಕೋಟಾ ವೈದ್ಯಕೀಯ ಸೀಟು ಮೀಸಲಿಡಲಾಗಿದೆ ಎಂದರು.

*ಹೆಣ್ಣೂರಿನಲ್ಲಿ 300 ಹಾಸಿಗೆಯುಳ್ಳ ಸ್ಪರ್ಶ್‌ ಆಸ್ಪತ್ರೆ ಶಾಖೆ ಉದ್ಘಾಟನೆ*:
ಸ್ಪರ್ಶ್‌ ಆಸ್ಪತ್ರೆ ಸಮೂಹವು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನೂತನವಾಗಿ ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ ಬಹು ವಿಭಾಗೀಯ ರೋಗಿ ಕೇಂದ್ರಿತ ಚಿಕಿತ್ಸೆ, ಅತ್ಯುತ್ತಮ ಗುಣಮಟ್ಟದ ಮತ್ತು ಎಲ್ಲರಿಗೂ ಲಭ್ಯವಾಗುವಂತಿರುವ 300 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರಯನ್ನು ಭಾನುವಾರ ಚಾಲನೆ ನೀಡಲಾಗಿದೆ.
ಸಮಗ್ರ ಚಿಕಿತ್ಸಾ ಸೇವೆಗಳನ್ನೊಳಗೊಂಡ ಹೆಣ್ಣೂರು ರಸ್ತೆ ಸ್ಪರ್ಶ್‌ ಆಸ್ಪತ್ರೆಯು ಮೂಳೆ, ನರ ವಿಜ್ಞಾನ, ಹೃದ್ರೋಗ ವಿಭಾಗ, ಕ್ಯಾನ್ಸರ್‌ ಚಿಕಿತ್ಸೆಗಳೂ ಸೇರಿದಂತೆ ಅಂಗಾಂಗ ಕಸಿ ವಿಭಾಗಗಳನ್ನೊಳಗೊಂಡಿದ್ದು ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ಕೇಂದ್ರವನ್ನೊಳಗೊಂಡಿದೆ.
ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷ ಡಾ.ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ“ ಈ ನೂತನ ಆಸ್ಪತ್ರೆ ಉದ್ಘಾಟನೆಯೊಂದಿಗೆ ನಾವು ನಿಖರವಾದ, ಸಹಾನುಭೂತಿಯ ಹಾಗೂ ಎಲ್ಲ ವರ್ಗಗಳ ಕೈಗೆಟಕುವಂತೆ ಸೇವೆ ನೀಡುವ ನಮ್ಮ ಧ್ಯೇಯವನ್ನು ಮುಂದುವರಿಸುತ್ತಿದ್ದೇವೆ. ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರೋಗನಿರ್ಣಯಗಳು ಹಾಗೂ 3 ಡಿ ಮುದ್ರಣ ತಂತ್ರಜ್ಞಾನವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಈ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು ನಮ್ಮ ಸಮುದಾಯಗಳಿಗೆ ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಹೆಚ್ಚು ಹೆಚ್ಚಾಗಿ ನೀಡುವ ಗುರಿ ಹೊಂದಿದ್ದೇವೆ.” ಎಂದರು.
ಭವಿಷ್ಯದ ಮುನ್ನೋಟದೊಂದಿಗೆ ವಿನ್ಯಾಸಗೊಳಿಸಲಾದ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯು ಬಹು ವಿಭಾಗೀಯ ಮತ್ತು ವಿಶೇಷ ಚಿಕಿತ್ಸಾ ವಿಭಾಗಗಳು, ಮೂಳೆ, ನರವಿಜ್ಞಾನ, ಹೃದ್ರೋಗ ವಿಭಾಗ, ಅಂಗಾಂಗ ಕಸಿ, ಕ್ಯಾನ್ಸರ್‌ ಚಿಕಿತ್ಸೆ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ವಿಭಾಗಗಳನ್ನು ಹೊಂದಿದೆ. ನವಯುಗದ ತಂತ್ರಜ್ಞಾನಗಳ ಆವಿಷ್ಕಾರಗಳನ್ನೂ ಅಳವಡಿಸಿಕೊಂಡಿರುವ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯಲ್ಲಿ ಅಂಕಿ ಅಂಶ ಚಾಲಿತ ಸೇವಾ ಸೌಕರ್ಯಗಳು, ನೈಜ ಅವಧಿಯ ಚಿಕಿತ್ಸಾ ವಿಶ್ಲೇಷಣೆಗಳು, ರೊಬೋಟಿಕ್‌ ಸಹಾಯದೊಂದಿಗೆ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ ಚಾಲಿತ ರೋಗ ನಿರ್ಣಯಗಳು ಹಾಗೂ ವೈಯಕ್ತಿಕ ಔಷಧೋಪಚಾರಗಳೊಂದಿಗೆ ರೋಗಿಗಳ ಆರೈಕೆಯ ನಿಟ್ಟಿನಲ್ಲಿ ಶ್ರೇಷ್ಟ ಗುಣಮಟ್ಟವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ ಮತ್ತು ಕ್ಲಿನಿಕಲ್‌ ಸಂಶೋಧನೆಗೂ ಈ ಆಸ್ಪತ್ರೆಯು ಅನುವು ಮಾಡಲಿದೆ.
ವೈದ್ಯಕೀಯ ವಿಚಾರದಲ್ಲಿ ಅತ್ಯುನ್ನತ ಮಟ್ಟದ ಚಿಕಿತ್ಸೆ ಜೊತೆಗೆ ಸುಮಾರು 2,500 ಮಂದಿಗೆ ನೇರ ಉದ್ಯೋಗಾವಕಾಶವನ್ನೂ ಈ ಬೃಹತ್‌ ಆಸ್ಪತ್ರೆಯು ಒದಗಿಸುತ್ತಿದ್ದು ಈ ಭಾಗದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಲಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.
ಸ್ಪರ್ಶ್‌ ಆಸ್ಪತ್ರೆ ಸಮಮೂಹದ ವಿಸ್ತರಣಾ ಯೋಜನೆಯಲ್ಲಿ ಹೆಣ್ಣೂರು ಆಸ್ಪತ್ರೆ ಉದ್ಘಾಟನೆಯು ಮಹತ್ವದ ಮೈಲಿಗಲ್ಲಾಗಿದ್ದು ಈ ವರ್ಷಾಂತ್ಯದೊಳಗೆ 9 ಆಸ್ಪತ್ರೆಗಳಲ್ಲಿ 1,700 ಹಾಸಿಗೆ ಸಾಮರ್ಥ್ಯದ ಗುರಿ ಹೊಂದಲಾಗಿದೆ. ವಿಸ್ತರಣೆಯು ಹೆಣ್ಣೂರು ಸೌಲಭ್ಯದ ಮೇಲೆ ಗಣನೀಯ ಪ್ರಮಾಣದ ಹೂಡಿಕೆಯನ್ನೂ ಒಳಗೊಂಡಿದೆ.
ಆಸ್ಪತ್ರೆಯು ಈ ಭಾಗದ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಆಸ್ಪತ್ರೆಯ ವಿನ್ಯಾಸವು ಕೂಡ ರೋಗಿಗಳಿಗೆ ಆಹ್ಲಾದಕರವಾದ ಅನುಭವವನ್ನು ನೀಡುವಂತೆ ನಿರ್ಮಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನವು ಮಾನವೀಯ ಸ್ಪರ್ಶವನ್ನು ಮಿಳಿತಗೊಳಿಸುವಂತೆ ಸ್ಪರ್ಶ್‌ ಹೆಣ್ಣೂರು ವಿಭಾಗವು ತಲೆ ಎತ್ತಿದ್ದು ಸ್ಪರ್ಶ್‌ ಸೇವಾ ಬದ್ಧತೆಗೆ ಸಾಕ್ಷಿಯಾಗಿದೆ.
ಹೆಣ್ಣೂರು ರಸ್ತೆಯಲ್ಲಿ ಸ್ಪರ್ಶ್‌ ಆಸ್ಪತ್ರೆ ಕಾರ್ಯಾರಂಭದೊಂದಿಗೆ ಸ್ಪರ್ಶ್‌ ಸಮೂಹವು ಸ್ಥಳೀಯವಾಗಿ ಆರೋಗ್ಯ ಸೇವೆಯಲ್ಲಿ ಜಾಗತಿಕ ಗುಣಮಟ್ಟದ ಮಾನದಂಡಗಳೊಂದಿಗೆ ಕ್ರಾಂತಿಕಾರಕ ಬದಲಾವಣೆ ಮಾಡುವ ಸ್ಪರ್ಶ್‌ ಆಸ್ಪತ್ರೆ ಸಮೂಹದ ಬದ್ಧತೆಯನ್ನು ಪುನರುಚ್ಛರಿಸುತ್ತದೆ ಎಂದು ಡಾ.ಶರಣ್‌ ಶಿವರಾಜ್‌ ಪಾಟೀಲ್‌ ವಿವರಿಸಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀಗಳಾದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ,ಬಿ.ಎ.ಬಸವರಾಜ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು