7:12 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಇಂಫಾಲ್ ನಲ್ಲಿ ಭಾರೀ ಪ್ರವಾಹ; ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

31/05/2025, 20:02

ಇಂಫಾಲ್(reporterkarnataka.com): ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಂಫಾಲ್ ಪೂರ್ವ ಜಿಲ್ಲೆಯ ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತಗೊಂಡಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಂಫಾಲ್ ನದಿಯಿಂದ ಭಾರೀ ಪ್ರಮಾಣದಲ್ಲಿ
ನೀರು ಹರಿದು ಬರುತ್ತಿದ್ದು, ಹಠಾತ್ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಕೆಲವು ಪೀಡಿತ ಪ್ರದೇಶಗಳಲ್ಲಿ ಖುರೈ ಪ್ರದೇಶ, ಖುರೈ ಹೈಕ್ರುಮಾಖೋಂಗ್ ಪ್ರದೇಶ, ಹೀಂಗಾಂಗ್ ಮತ್ತು ಕೊನುಂಗ್ ಮಾಮಾಂಗ್ ಪ್ರದೇಶಗಳ ಭಾಗಗಳು ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಪ್ರದೇಶಗಳು ಸೇರಿವೆ.
ಮಣಿಪುರ ಗವರ್ನರ್ ಅಜಯ್ ಕುಮಾರ್ ಭಲ್ಲಾ ಅವರು ನೊಂಗ್‌ಪೋಕ್ ಥಾಂಗ್, ಲೈರಿಕ್ಯೆನ್‌ಬಾಮ್ ಲೈಕೈ ಮತ್ತು ಸಿಂಜಮೇಯ್‌ನಲ್ಲಿ ಜಲಸಂಪನ್ಮೂಲಗಳ ಆಯುಕ್ತರೊಂದಿಗೆ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಮಧ್ಯೆ, ಖುರೈ ಅಸೆಂಬ್ಲಿ ಶಾಸಕ ಎಲ್.ಸುಶೀಂದ್ರೋ ಅವರು ತಮ್ಮ ಖುರೈ ಪ್ರದೇಶಗಳಲ್ಲಿ ಸ್ಥಳೀಯರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ಪ್ರಕಾರ, ಐದು ಗ್ರಾಮ ಪಂಚಾಯತ್ ಪ್ರದೇಶಗಳು ಖುರೈ ಪ್ರದೇಶದಲ್ಲಿವೆ: ನಂದೆಬಾಮ್ ಲೈಕೈ, ಕೊನ್ಸಮ್ ಲೈಕೈ, ಲಿಯಾಶ್ರಮ್ ಲೈಕೈ, ಮತ್ತು ಚಿಂಗಖುಮ್ ಲೈಕೈ. ಈ ಪ್ರದೇಶಗಳು ಪ್ರವಾಹಕ್ಕೊಳಗಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು