7:23 PM Sunday25 - May 2025
ಬ್ರೇಕಿಂಗ್ ನ್ಯೂಸ್
Bangalore | ವಿಧಾನ ಸೌಧ ಇನ್ನು ಮುಂದೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ: ಸಚಿವ… ಮಂಗಳೂರು:ಧರೆಗುರುಳಿದ ನಾಲ್ಕು ಮರಗಳು, ಜಖಂಗೊಂಡ ವಾಹನಗಳು ; ಸ್ಮಾರ್ಟ್ ಸಿಟಿಯೊಳಗಿನ ಅವೈಜ್ಞಾನಿಕ ಕಾಮಗಾರಿಗೆ… Kolara | ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ: ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ… New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ… ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ… Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

ಇತ್ತೀಚಿನ ಸುದ್ದಿ

ಅತಿವೃಷ್ಟಿ: ದ.ಕ. ಜಿಲ್ಲೆಗೆ ಎನ್.ಡಿ.ಆರ್.ಎಫ್/‌ಎಸ್.ಡಿ.ಆರ್.ಎಫ್. ತಂಡ ಆಗಮನ

25/05/2025, 19:17

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ .
ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಈ ವಿಷಯ ತಿಳಿಸಿದ್ದಾರೆ.
ಭಾನುವಾರ ಅವರು ಜಿಲ್ಲೆಯ ಮಳೆ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಆನ್ ಲೈನ್ ಸಭೆ ನಡೆಸಿ ಮಾತನಾಡಿದರು.


ರಾಷ್ಟ್ರೀಯ ವಿಪತ್ತು ದಳ(ಎನ್.ಡಿ.ಆರ್.ಎಫ್.) ದ ಒಂದು ತಂಡವು ಆಗಮಿಸಲಿದ್ದು, ಇದನ್ನು ಪುತ್ತೂರಿನಲ್ಲಿ ಇಡಲಾಗುವುದು. ರಾಜ್ಯ ವಿಪತ್ತು ದಳ(ಎಸ್.ಡಿ.ಆರ್.ಎಫ್) ಎರಡು ತಂಡವು ಆಗಮಿಸಲಿದ್ದು, ಮಂಗಳೂರು ಹಾಗೂ ಸುಬ್ರಹ್ಮಣ್ಯ ದಲ್ಲಿ ಇಡಲಾಗುವುದು. ಈ ದಳಗಳು‌ ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದ್ದು, ಪ್ರಾಕೃತಿಕ ವಿಪತ್ತುಗಳ‌ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ. ಎಸ್.ಡಿ.ಆರ್.ಎಫ್. ತಂಡ ಈಗಾಗಲೆ ಆಗಮಿಸಿದೆ ಎಂದು ಅವರು ಹೇಳಿದರು.
ವಿಪತ್ತು ನಿರ್ವಹಣೆಗೆ ‌‌ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾಪಂ ಪಿಡಿಓ ಗಳು ತಮ್ಮ‌ ವ್ಯಾಪ್ತಿಯಲ್ಲಿ ಕಟ್ಟೆಚ್ಚರದಿಂದ ಇರಬೇಕು. ಯಾವುದೇ ಪ್ರಾಕೃತಿಕ ದುರಂತಗಳು ಸಂಭವಿಸಿದರೆ ತಕ್ಷಣವೇ ಸ್ಪಂದಿಸಬೇಕು. ಜೀವ ಹಾನಿ ತಪ್ಪಿಸಲು ಆದ್ಯತೆ ನೀಡಬೇಕು. ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯಾಚರಿಸಿ, ದುರಂತದ ತೀವ್ರತೆ ತಗ್ಗಿಸಬೇಕು. ಮೆಸ್ಕಾಂ, ಅರಣ್ಯ ಸೇರಿದಂತೆ ಸಂಬಂಧಿಸಿದ ಯಾವುದೇ ಇಲಾಖೆಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹವಾಮಾನ ಇಲಾಖೆಯು 5 ದಿನ ರೆಡ್ ಅಲಟ್೯ ಘೋಷಿಸಿದೆ. ಈ‌ ಹಿಂದೆ ದುರ್ಘಟನೆ ಆಗಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಜೆಸಿಬಿ, ಬೋಟುಗಳನ್ನು ಸಿದ್ಧವಾಗಿಡಬೇಕು. ಶಾಲೆಗಳು ಶುರು ಆಗುವ ಮೊದಲು ಶಿಥಿಲಗೊಂಡಿರುವ ಅಂಗನವಾಡಿ ಮತ್ತು ಶಾಲಾ ಕೊಠಡಿಗಳನ್ನು ತೆರವುಗೊಳಿಸಲು ಡಾ. ಕೆ. ಆನಂದ್ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಂದ ಕೆಲವು ಜನವಸತಿ ಪ್ರದೇಶಗಳಲ್ಲಿ ತೀವ್ರ ತೊಂದರೆಯಾಗಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ಮಳೆಗಾಲ‌ ಶುರು ಆಗುವ ಮೊದಲೇ ಮೀನುಗಾರಿಕೆ ತೆರಳಿದ್ದ ಬೋಟುಗಳು ಹವಾಮಾನ ವೈಪರೀತ್ಯಗಳಿಂದ ಹಿಂದಿರುಗಿ ಬರುತ್ತಿದ್ದು, ಈ ಬೋಟುಗಳಿಗೆ ಎನ್.ಎಂ.ಪಿ.ಎ. ಬಂದರಿಗೆ ಪ್ರವೇಶಿಸಲು ಅನುಮತಿ ನೀಡಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು