ಇತ್ತೀಚಿನ ಸುದ್ದಿ
ತೀರ್ಥಹಳ್ಳಿಯಲ್ಲಿ ಬಾರಿ ಮಳೆ: ಸಂಜೆ ತೋಟಕ್ಕೆ ಹೋಗಿದ್ದ ವೃದ್ದ ನಾಪತ್ತೆ; ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ
06/07/2026, 17:56
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ವೃದ್ಧರೊಬ್ಬರು ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿರುವ ಘಟನೆ ಕೇಳೂರು ಗ್ರಾಮದಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಳೂರು ಗ್ರಾಮದಲ್ಲಿ ತೋಟಕ್ಕೆಂದು ಹೋಗಿದ್ದ ರಾಮಪ್ಪ (62 ) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ತೋಟಕ್ಕಾಗಿ ಹೋಗಿದ್ದ ವೃದ್ದರು ಪಕ್ಕದ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎಂಬುದಾಗಿ ಶಂಕೆ ವ್ಯಕ್ತವಾಗಿದೆ.
ನದಿ ಸಮೀಪದಲ್ಲಿ ಚಪ್ಪಲಿ ಹಾಗೂ ಬಟ್ಟೆ ಇದ್ದು, ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.












