11:55 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಡಗು ಗಡಿ ಪ್ರದೇಶದಲ್ಲಿ ಭಾರಿ ಮಳೆ: ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ

18/07/2025, 20:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ.


ಬೆಳಗಾಂನ ಸಿಂದೋಗಿನಿಂದ ರಬ್ಬರ್ ಪ್ಲಾಂಟೇಷನ್ ನಲ್ಲಿ ಹಿಟಾಚಿ ಕೆಲಸಕ್ಕೆ ಆಗಮಿಸಿದ್ದ ತಂಡಲ್ಲಿ ಇದ್ದ ಸಹಾಯಕನಾಗಿದ್ದ ದುರ್ಗಪ್ಪ ಮಾದರ (19) ಊಟ ತರಲೆಂದು ಸೇತುವೆ ದಾಟಿ ಕರಿಕೆಗೆ ಬೈಕ್ ನಲ್ಲಿ ತೆರಳಿದ್ದ ಎನ್ನಲಾಗಿದೆ. ಹಲವು ಸಮಯ ಕಳೆದರು ದುರ್ಗಪ್ಪ ವಾಪಸು ಬರದಿರುವ ಹಿನ್ನೆಲೆಯಲ್ಲಿ ಹಿಟಾಚಿ ಚಾಲಕ ತನ್ನ ಪತ್ನಿಗೆ ಕರೆ ಮಾಡಿದ್ದ್ದು, ದುರ್ಗಪ್ಪ ಬಂದಿಲ್ಲ ಎಂದು ತಿಳಿದು ಬಂದಿದೆ. ಇದೇ ಸಮಯದಲ್ಲಿ ಭಾರಿ ಮಳೆಗೆ ಸೇತುವೆ ಮುಳುಗಿದ್ದು, ಸ್ಥಳದಲ್ಲಿ ಬೈಕ್ ನ ಗುರುತುಗಳು ಪತ್ತೆಯಾಗಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನ ಅಗ್ನಿ ಶಾಮಕ ಮತ್ತು NDRF ತಂಡ ಸುಮಾರು 5 ಕಿಲೋಮೀಟರು ವರೆಗೆ ಶೋಧ ಕಾರ್ಯ ನಡೆಸಿದೆ. ಬೆಳಗಾವಿಯಿಂದ ಮೃತನ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಆಕ್ರಂಧನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು