7:30 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ ಸಂಗಮದ ಉದ್ಯಾನವನ ಜಲಾವೃತ

27/07/2025, 14:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದೆರಡು ದಿನಗಳಿಂದ ನಿರಂತರವಾಗಿ ಉಂಟಾಗಿರುವ ಗಾಳಿ ಮಳೆಗೆ ಕೊಡಗು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು ಅಪಾಯದ ಮಟ್ಟ ತಲುಪಿದೆ. ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಹನ್ನೆರಡು ಗಂಟೆಗಳ ಅವಧಿಯಲ್ಲಿ 180 ಮಿಲಿಮೀಟರ್ ನಷ್ಟು ಮಳೆ ದಾಖಲಾಗಿದೆ. ಭಾಗಮಂಡಲದ ಕಾವೇರಿ, ಕನ್ನಿಕೆ ಮತ್ತು ಸುಜ್ಜ್ಯತಿ ನದಿಗಳು ಭರ್ತಿಯಾಗಿ ತ್ರಿವೇಣಿ ಸಂಗಮ ಮತ್ತು ಉದ್ಯಾನವನ ಜಲಾವೃತ ಗೊಂಡಿದೆ. ಬಲಮುರಿ, ಬೇತ್ರಿ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದೆ, ನಾಪೋಕ್ಲು ಬಳಿ ನದಿ ನೀರು ರಸ್ತೆ, ತೋಟಗಳಿಗೆ ಆವರಿಸಿದೆ.


ಕರಡಿಗೋಡು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಸ್ಥಳೀಯರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇತ್ತ ಕುಶಾಲನಗರ ಪಟ್ಟಣದ ನದಿ ಪಾತ್ರದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. ಹಾರಂಗಿ ಜಲಾಶಯ ದಿಂದ 25 ಸಾವಿರ ಕ್ಯೂಸಕ್ಸ್ ನೀರು ನದಿಗೆ ಹೊರ ಬಿಡಲಾಗಿರುವುದರಿಂದ ಕೂಡಿಗೆ ಹಾಗೂ ಕಣಿವೆ ತೂಗು ಸೇತುವೆ ಮುಟ್ಟುವ ಸ್ಥಿತಿಗೆ ತಲುಪಿದೆ. ಸೋಮವಾರಪೇಟೆ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಕ್ಕೋದ್ಲು,ಹಟ್ಟಿ ಹೊಲೆ, ಮಾದಾಪುರ ಹೊಳೆ, ಹರದೂರು ಹೊಳೆ ಭಾಗದಿಂದ ನೀರು ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ದಕ್ಷಿಣ ಕೊಡಗಿನ ಭಾಗದ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು ಭತ್ತದ ಗದ್ದೆ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ, ಬಿರುನಾಣಿ, ಕಾನೂರು, ಭಾಗದಲ್ಲಿ ಸಣ್ಣ ಪುಟ್ಟ ತೊರೆಗಳು ನದಿ ಸ್ವರೋಪ ಪಡೆದುಕೊಂಡು ಹರಿಯುತ್ತಿದ್ದು ಕೆಲವೆಡೆ ಸಂಪರ್ಕ ಸೇತುವೆ ಕುಸಿಯುವ ಭೀತಿ ಎದುರಿಸುತ್ತಿದಲ್ಲದೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು