10:09 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ ಸಂಗಮದ ಉದ್ಯಾನವನ ಜಲಾವೃತ

27/07/2025, 14:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದೆರಡು ದಿನಗಳಿಂದ ನಿರಂತರವಾಗಿ ಉಂಟಾಗಿರುವ ಗಾಳಿ ಮಳೆಗೆ ಕೊಡಗು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು ಅಪಾಯದ ಮಟ್ಟ ತಲುಪಿದೆ. ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಹನ್ನೆರಡು ಗಂಟೆಗಳ ಅವಧಿಯಲ್ಲಿ 180 ಮಿಲಿಮೀಟರ್ ನಷ್ಟು ಮಳೆ ದಾಖಲಾಗಿದೆ. ಭಾಗಮಂಡಲದ ಕಾವೇರಿ, ಕನ್ನಿಕೆ ಮತ್ತು ಸುಜ್ಜ್ಯತಿ ನದಿಗಳು ಭರ್ತಿಯಾಗಿ ತ್ರಿವೇಣಿ ಸಂಗಮ ಮತ್ತು ಉದ್ಯಾನವನ ಜಲಾವೃತ ಗೊಂಡಿದೆ. ಬಲಮುರಿ, ಬೇತ್ರಿ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದೆ, ನಾಪೋಕ್ಲು ಬಳಿ ನದಿ ನೀರು ರಸ್ತೆ, ತೋಟಗಳಿಗೆ ಆವರಿಸಿದೆ.


ಕರಡಿಗೋಡು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಸ್ಥಳೀಯರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇತ್ತ ಕುಶಾಲನಗರ ಪಟ್ಟಣದ ನದಿ ಪಾತ್ರದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. ಹಾರಂಗಿ ಜಲಾಶಯ ದಿಂದ 25 ಸಾವಿರ ಕ್ಯೂಸಕ್ಸ್ ನೀರು ನದಿಗೆ ಹೊರ ಬಿಡಲಾಗಿರುವುದರಿಂದ ಕೂಡಿಗೆ ಹಾಗೂ ಕಣಿವೆ ತೂಗು ಸೇತುವೆ ಮುಟ್ಟುವ ಸ್ಥಿತಿಗೆ ತಲುಪಿದೆ. ಸೋಮವಾರಪೇಟೆ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಕ್ಕೋದ್ಲು,ಹಟ್ಟಿ ಹೊಲೆ, ಮಾದಾಪುರ ಹೊಳೆ, ಹರದೂರು ಹೊಳೆ ಭಾಗದಿಂದ ನೀರು ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ದಕ್ಷಿಣ ಕೊಡಗಿನ ಭಾಗದ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು ಭತ್ತದ ಗದ್ದೆ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ, ಬಿರುನಾಣಿ, ಕಾನೂರು, ಭಾಗದಲ್ಲಿ ಸಣ್ಣ ಪುಟ್ಟ ತೊರೆಗಳು ನದಿ ಸ್ವರೋಪ ಪಡೆದುಕೊಂಡು ಹರಿಯುತ್ತಿದ್ದು ಕೆಲವೆಡೆ ಸಂಪರ್ಕ ಸೇತುವೆ ಕುಸಿಯುವ ಭೀತಿ ಎದುರಿಸುತ್ತಿದಲ್ಲದೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು