2:26 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ

17/08/2025, 19:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ನಾಳೆ(ಆ.18)ರಜೆ ಸಾರಲಾಗಿದೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ
ಮುಂದುವರಿದಿದ್ದು,ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ.


ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ಕೂಡ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ‌ಯಾಗಿತ್ತು‌.
ಶೃಂಗೇರಿಯಲ್ಲಿ ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತವಾಗಿದೆ.
ಭಾರೀ ಮಳೆಗೆ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ.
ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿದ್ದ ಕಾರುಗಳು ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ಹೊಲ-ಗದ್ದೆ-ತೋಟಗಳಿಗೆ ನೀರು ನುಗ್ಗಿದೆ. ಮಹಾಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು