12:42 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ

27/07/2025, 12:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ.


ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ಸ್ಥಳೀಯ ನಿವಾಸಿಗಳ ಜತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ.
ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ.
ನಿನ್ನೆ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕ್ಷಣ-ಕ್ಷಣಕ್ಕೂ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು