2:18 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ

25/07/2025, 20:10

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
ಬಂಟ್ವಾಳ ತಾಲೂಕಿನ‌ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.


ಕಾವಳಮುಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಗೊಳಗಾಗಿದೆ.
ದೇವಸ್ಯ ಪಡೂರು ಗ್ರಾಮದ ನುರ್ತಾಡಿ ನಿವಾಸಿ ಯಮುನಾ ಕೋಂ ರುಕ್ಮಯ ಪೂಜಾರಿ ರವರ ಮನೆಯ ಹಿಂಭಾಗ ದ ಗೋಡೆ ಕುಸಿತವಾಗಿ ಹಾನಿಯುಂಟಾಗಿದೆ.ಕೇಪು ಗ್ರಾಮದ ಗುತ್ತುದಡ್ಕ ಎಂಬಲ್ಲಿ ನಾರಾಯಣ ಎಂಬವರ ಮನೆಯ ಮುಂಭಾಗ ಅಳವಡಿಸಿರುವ ಶೀಟ್ ಛಾವಣಿ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಪಿಲಾತಬೆಟ್ಟು ಗ್ರಾಮದ ಕವಿತಾ ಅವರ ಮನೆಗೆ ಇಂದು ಬೆಳಿಗ್ಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು