12:12 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ

25/07/2025, 20:10

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
ಬಂಟ್ವಾಳ ತಾಲೂಕಿನ‌ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.


ಕಾವಳಮುಡೂರು ಗ್ರಾಮದ ಕೆದ್ದಳಿಕೆ ನಿವಾಸಿ ಪದ್ಮಾವತಿ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಗೊಳಗಾಗಿದೆ.
ದೇವಸ್ಯ ಪಡೂರು ಗ್ರಾಮದ ನುರ್ತಾಡಿ ನಿವಾಸಿ ಯಮುನಾ ಕೋಂ ರುಕ್ಮಯ ಪೂಜಾರಿ ರವರ ಮನೆಯ ಹಿಂಭಾಗ ದ ಗೋಡೆ ಕುಸಿತವಾಗಿ ಹಾನಿಯುಂಟಾಗಿದೆ.ಕೇಪು ಗ್ರಾಮದ ಗುತ್ತುದಡ್ಕ ಎಂಬಲ್ಲಿ ನಾರಾಯಣ ಎಂಬವರ ಮನೆಯ ಮುಂಭಾಗ ಅಳವಡಿಸಿರುವ ಶೀಟ್ ಛಾವಣಿ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಪಿಲಾತಬೆಟ್ಟು ಗ್ರಾಮದ ಕವಿತಾ ಅವರ ಮನೆಗೆ ಇಂದು ಬೆಳಿಗ್ಗೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು