11:47 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಪತ್ನಿಯ ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ

26/04/2023, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.


ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು. ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು