9:25 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಪತ್ನಿಯ ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ

26/04/2023, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.


ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು. ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು